ಕೆ.ಜಿ.ಎಫ್. ಪೊಲೀಸ್ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಿನಾಂಕ 04.02.2021 ರಂದು ದಾಖಲಾಗಿರುವ ಅಪರಾಧ ಪ್ರಕರಣಗಳ ವಿವರಗಳು.
– ರಸ್ತೆ ಅಪಘಾತಗಳು : 01
ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ರಸ್ತೆ ಅಪಘಾತ ಪ್ರಕರಣ ದಾಖಲಾಗಿರುತ್ತದೆ. ದೂರುದಾರರಾದ ಶ್ರೀ. ವೆಂಕಟೇಶಪ್ಪ ಬಿನ್ ಮುನಿಸ್ವಾಮಿ, ನೇರಳಕೆರೆ ಗ್ರಾಮ, ಬಂಗಾರಪೇಟೆ ತಾಲ್ಲೂಕು ರವರು ದಿನಾಂಕ 03.02.2021 ರಂದು ಸಂಜೆ 6.30 ಗಂಟೆಯಲ್ಲಿ ಆಲಂಬಾಡಿ ಗ್ರಾಮಕ್ಕೆ ಹೋಗಲು ಟಿವಿಎಸ್ ಎಕ್ಸೆಲ್ ಹೆವಿ ಡ್ಯೂಟಿ ದ್ವಿಚಕ್ರ ವಾಹನ ಸಂಖ್ಯೆ ಕೆಎ-08-ವೈ-4252 ರಲ್ಲಿ ನಾದಿನಿ ಲಾವಣ್ಯ ಹಾಗೂ ಮಗು ಸುಸ್ಮಿತ ರವರನ್ನು ಕುಳ್ಳರಿಸಿಕೊಂಡು, ಆಲಂಬಾಡಿ ಬಳಿಯಿರುವ 6ನೇ ಮೈಲಿ ಗೇಟ್ ಬಳಿ ಹೋಗುತ್ತಿದ್ದಾಗ, ಬೂದಿಕೋಟೆ ಕಡೆಯಿಂದ ಪಲ್ಸರ್ ದ್ವಿಚಕ್ರ ವಾಹನ ಸಂಖ್ಯೆ ಕೆಎ-08-ವೈ-5698 ನ್ನು ಸವಾರನು ಅತಿವೇಗ ಮತ್ತು ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು ದೂರುದಾರರ ದ್ವಿಚಕ್ರ ವಾಹನಕ್ಕೆ ಡಿಕ್ಕಿಪಡಿಸಿದ ಪರಿಣಾಮ ದೂರುದಾರರು, ಲಾವಣ್ಯ, ಸುಸ್ಮಿತ ರವರುಗಳು ದ್ವಿಚಕ್ರ ವಾಹನ ಸಮೇತ ಕೆಳಗೆ ಬಿದ್ದಾಗ ರಕ್ತಗಾಯಗಳಾಗಿರುತ್ತದೆ.
– ಅಸ್ವಾಭಾವಿಕ ಮರಣ ಪ್ರಕರಣ : 01
ಕಾಮಸಮುದ್ರಂ ಪೊಲೀಸ್ ಠಾಣೆಯಲ್ಲಿ ಅಸ್ವಾಭಾವಿಕ ಮರಣ ಪ್ರಕರಣ ದಾಖಲಾಗಿರುತ್ತದೆ. ದೂರುದಾರರಾದ ಶ್ರೀ. ಜಗದೀಶ್ ಬಿನ್ ತಿಮ್ಮರಾಯಪ್ಪ, ಆರಿಮಾನಹಳ್ಳಿ ಗ್ರಾಮ, ಬಂಗಾರಪೇಟೆ ತಾಲ್ಲೂಕು ರವರ ತಂದೆ ತಿಮ್ಮರಾಯಪ್ಪ, 68 ವರ್ಷ ರವರು ವ್ಯವಸಾಯ ಮಾಡಲು ಬೋಡಗುರ್ಕಿ ವ್ಯವಸಾಯ ಸಂಘದಲ್ಲಿ 1 ಲಕ್ಷ ರೂಗಳನ್ನು ಸಾಲ ಪಡೆದಿದ್ದು ಸದರಿ ಸಾಲವನ್ನು ತಿರಿಸಲಾಗದೆ ಜೀವನದಲ್ಲಿ ಜಿಗುಪ್ಸೆಗೊಂಡು ದಿನಾಂಕ: 27.01.2021 ರಂದು ಆರಿಮಾನಹಳ್ಳಿ ಗ್ರಾಮದ ಶೇಖರ್ ರವರ ಜಮೀನಿನಲ್ಲಿರುವ ಹೊಂಗೆ ಮರಕ್ಕೆ ಹಗ್ಗದಿಂದ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡು ಮೃತಪಟ್ಟಿರುತ್ತಾರೆ.